'ಪ್ರಜಾವಾಣಿ' ವರದಿ |
ಕೊತ್ತಗೆರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶೆಟ್ಟಿಗೆರೆಯ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ಆವರಣದಲ್ಲಿ ವಿ.ಕೃ.ಗೋಕಾಕ್ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತುಮಕೂರು ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಡಿ.ಚಂದ್ರಪ್ಪ ಗೋಕಾಕರನ್ನು ಕುರಿತು ಉಪನ್ಯಾಸ ನೀಡಿದರು. ಸಮೂಹ ಸಹಾಯಕ ಶಿಕ್ಷಣಾಧಿಕಾರಿ ಆರ್.ರಂಗಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕುಣಿಗಲ್ ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಚ್.ವೆಂಕಟೇಶ್ ಉಪಸ್ಥಿತರಿದ್ದರು. ಕೊತ್ತಗೆರೆ ಹೋಬಳಿ ಕಸಾಪ ಅಧ್ಯಕ್ಷ ತ.ನಂ.ಜ್ಞಾನೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು.
No comments:
Post a Comment